ಗಂಗಾ ಕಲ್ಯಾಣ ಯೋಜನೆ
ಎಲ್ಲರಿಗೂ ನಮಸ್ಕಾರಗಳು ಇವತ್ತಿನ ಮಾಹಿತಿ ಪ್ರಕಾರ ಬೋರ್ವೆಲ್ ಕೊರೆಸಲು ಮತ್ತು ಪಂಪ್ಸೆಟ್ ಮೋಟಾರ್ ಹಾಗೂ ವಿದ್ಯುತ್ ಕರಣ ಮಾಡಲು ಸರ್ಕಾರದಿಂದ ಸಹಾಯಧನ ಪಡೆಯಬೇಕೆ? ಹಾಗಾದರೆ.ಈ ಲೇಖನವನ್ನ ಪೂರ್ತಿಯಾಗಿ ಓದಿ.
ಗಂಗಾ ಕಲ್ಯಾಣಿ ಯೋಜನೆ :
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸುವ ಯೋಜನೆಯಾಗಿದ್ದು, ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಪಡೆಯಬಹುದಾಗಿದ.
ಕರ್ನಾಟಕ ಗಂಗಾ ಕಲ್ಯಾಣ ಯೋಜನೆ 2023:
ಯೋಜನೆ ಗಂಗಾ ಕಲ್ಯಾಣ
ಅರ್ಜಿದಾರ ವಯಸ್ಸು 18 ರಿಂದ 55 ವರ್ಷ
ಸಹಾಯಧನದ ಮೊತ್ತ ಮೂರು ಲಕ್ಷದಿಂದ ನಾಲ್ಕು ಲಕ್ಷದ ವರೆಗೆ
ಈ ಯೋಜನೆಯು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅವರಿಗೆ ಮಾತ್ರ ಈ ಯೋಜನೆಗೆಹರಾಗಿರುತ್ತಾರೆ
ವೈಯಕ್ತಿಕ ಕೊಳವೆ ಬಾವಿ ಯೋಜನೆಗಾಗಿ ಸರ್ಕಾರವು ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಚಿಕ್ಕಮಂಗಳೂರು ರಾಮನಗರ ತುಮಕೂರು ಜಿಲ್ಲೆಗಳಿಗೆ 4 ಲಕ್ಷ ರೂಗಳನ್ನ ನೀಡುತ್ತದೆ . ಮತ್ತು ಇತರೆ ಇನ್ನುಳಿದ ಜಿಲ್ಲೆಗಳಿಗೆ 3 ಲಕ್ಷಗಳು ಮಾತ್ರ ನಿಗದಿಪಡಿಸಲಾಗುತ್ತದೆ.
ಅರ್ಹತೆ:
- ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
- ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಖುಷ್ಕಿ ಜಮೀನಿರಬೇಕು,ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಠ 1 ಎಕರೆ ಜಮೀನನ್ನು ಹೋದಿರತಕ್ಕದ್ದು.
- ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
- ಅರ್ಜಿದಾರರು ಸಣ್ಣ /ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.
- ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 96,000/- ಗಳನ್ನು ಮೀರಬಾರದು.
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು
ಬೇಕಾಗುವ ದಾಖಲಾತಿಗಳು :-
1.ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ
2.ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
3.ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
4.ಇತ್ತೀಚಿನ ಆರ್ಟಿಸಿ ಪ್ರತಿ
5.ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ
6.ಬ್ಯಾಂಕ್ ಪಾಸ್ ಬುಕ್ ಪ್ರತಿ
7.ಭೂ-ಕಂದಾಯ ಪಾವತಿಸಿದ ರಸೀದಿ
8.ಸ್ವಯಂ ಘೋಷಣೆ ಪತ್ರ
9.ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ:-
ಅಭ್ಯರ್ಥಿ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಅಧಿಕೃತ ವೆಬ್ಸೈಟ್ ಇದಾಗಿದೆ:-
ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ:-


No comments: